ಇಷ್ಟೂ ದೂರ ಸಾಗಿ ಬಂದರೂ ನಾನು ಇನ್ನು ಗುರಿ ಮುಟ್ಟೆ ಇಲ್ಲ ಎಂಬ ಕಠೋರ ಸತ್ಯ ಅರಿವಿಗೆ ಬರುವದು ಒಮ್ಮೆ ಕತ್ತು ತಿರುಗಿಸಿ ಹಿಂದೆ ನೋಡಿದಾಗ. ನಾವು ಅಂದುಕೊಂಡ ಕನಸು, ನಾವು ಕಟ್ಟಿಕೊಂಡ ಗುರಿಯನ್ನು ತಲುಪುವ ಹಾದಿಯಲ್ಲಿ ನೂರೆಂಟು ಕವಲುಗಳು, ತಗ್ಗುದಿನ್ನೆಗಳು ಹೆಡೆ ಬಿಚ್ಚಿ ಸ್ವಾಗತಿಸುತ್ತವೆ. ನಮ್ಮ ಮನಸಿನ ನಿರ್ಧಾರವನ್ನು ಕೇಳದೆ ಬೇರೆ ಯಾರದೋ ಮಾತಿಗೆ ನಮ್ಮ ಕನಸನ್ನು ಚಿವುಟಿ ಮತ್ತೊಬ್ಬರ ಕನಸಿಗೆ ಜೀತದಾಳಾಗಿ ದುಡಿಯುವ ಪರಿ ದಿಕ್ಕು ದೆಸೆಯಿಲ್ಲದೆ ಸುತ್ತುವ ದಿಕ್ಸೂಚಿಯಿಲ್ಲದ ಹಡಗಿನಂತಾಗುತ್ತದೆ. ನಾನು ಹೊಗುವ ದಾರಿ ನನಗೆ ಮಾತ್ರ ಸ್ಪಷ್ಟವಾಗಿ ಕಾಣುತ್ತದೆ ಹೊರತು ಬೇರೆ ಯಾರಿಗೂ ಅಲ್ಲ. ಅದು ಎಂದಿಗೂ ಕವಲೊಡೆದು ಅಪರಿಚಿತ ಊರಿಗೆ ಹೋಗುವದಿಲ್ಲ. ಅಂದುಕೊಂಡ ಗೂಡಿಗೆ ನಮ್ಮನ್ನು ಕರೆದೊಯ್ಯುತ್ತದೆ. ಅಲ್ಲಿ ನಮಗಾಗಿ ಸುಖ ಸಂತೋಷದ ನಿಧಿ ಕಾದು ಕೂತಿರುತ್ತದೆ. ನಾನು ಸಾಗುವ ಹಾದಿಯಲ್ಲಿ ಮುಳ್ಳಿದೆ ಅಂತ ಗೊತ್ತಿದ್ದರೂ ಅದು ನನಗೆ ಅಚ್ಚುಮೆಚ್ಚಿನ ಹಾದಿಯಾಗಿರುತ್ತದೆ. ಅಲ್ಲಿ ನನಗಾಗಿ ಹೂವು ಹಾಸಿಗೆ ಹಾಸಿರುತ್ತದೆ. ತಂಪು ತಂಗಾಳಿಯ ಜೊತೆ ನೆರಳು ನೀಡುತ್ತದೆ. ಅದಕ್ಕೆ ನಾನು ಮಾಡಬೇಕಾದದ್ದು ಇಷ್ಟೇ, ನನಗಾಗಿ ನಾನು ಬದುಕುವದು. ಇದು ಒಂತರಾ ಸ್ವಾರ್ಥ ಎನಿಸಿದರೂ ಪರರಿಗೋಸ್ಕರ ದಿನಗಟ್ಟಲೆ ವ್ಯಯಿಸುವ ನಾನು ನನಗೋಸ್ಕರ ಒಂದಷ್ಟು ಸಮಯ ಕೊಡುವದರಲ್ಲಿ ಏನು ತಪ್ಪಿದೆ..? ಅದೇ ಸಂತೆಯ ಪರಿಚಿತವಿರುವ ಮಂದಿಯ ನಡುವೆ ನಮ್ಮ ದಾರಿ ಸಿಕ್ಕು ದಿಕ್ಕಾಪಾಲಾಗಿ ದಡ
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ